Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:15
15 ತಿಳಿವುಗಳ ಹೋಲಿಕೆ  

ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.


ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.


ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.


“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು