Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನು ಇಂತೆನ್ನುತ್ತಾನೆ ಎಂಬದಾಗಿ ನುಡಿದು ಹೀಗೆ ಸಾರು - ಆಹಾ, ಖಡ್ಗ, ಖಡ್ಗ, ಸಾಣೆಹಿಡಿದಿದೆ, ತಿಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ನೋಡು, ಒಂದು ಖಡ್ಗ, ಹರಿತವಾದ ಖಡ್ಗ, ಆ ಖಡ್ಗವು ಉಜ್ಜಿ ಶುಭ್ರಮಾಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:9
17 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.


ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.


ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”


ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು