Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:22
10 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”


ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು