Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:26
31 ತಿಳಿವುಗಳ ಹೋಲಿಕೆ  

ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ


“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.


ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”


ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.


“‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.


ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.


ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು