Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಬಾಬಿಲೋನಿನವರು ಇವಳ ರತಿಮಂಚವನ್ನೇರಿ ತಮ್ಮ ಕಾಮತೃಷೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಎಷ್ಟು ಅಶುದ್ಧಳಾದಳೆಂದರೆ ಇವಳಿಗೇ ಅವರ ಬಗ್ಗೆ ಜಿಗುಪ್ಸೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಬಾಬೆಲಿನವರು ಇವಳ ರತಿಮಂಚವನ್ನೇರಿ ತಮ್ಮ ಸೂಳೆಗಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಹೊಲಸಾಗಲು ಇವಳ ಆಶೆಯು ಅವರಿಂದ ತೊಲಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನ್ನೆರೀ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:17
8 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,


ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.


ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.


ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು