Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:47
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


“ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು