Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂತು. ಇದು ಸೆರೆಹೋದ (ಯೆಹೋಯಾಖೀನನು ಸೆರೆಯಾದ) ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:1
17 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.


ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.


(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.


“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು