Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:13
16 ತಿಳಿವುಗಳ ಹೋಲಿಕೆ  

ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.


ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’


ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.


ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು