Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ - ನಿನ್ನ ಮಧ್ಯದಲ್ಲಿ ಕೊಲೆಯುಂಟಾಗಿ ಗಾಯಪಟ್ಟವರು ನರಳುತ್ತಿರಲು ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:15
11 ತಿಳಿವುಗಳ ಹೋಲಿಕೆ  

ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.


ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.”


ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”


ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.


ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.


ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು