Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:19
7 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.


ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು