Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:8
9 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.


ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.


ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.


ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು