Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:13
17 ತಿಳಿವುಗಳ ಹೋಲಿಕೆ  

ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.


ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.


ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.


ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.


ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.


ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


“ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.


ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.


ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು