Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಾಬ್ಯರೂ ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಣ ವರ್ತಕರು; ಕುರಿ ಟಗರು ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:21
16 ತಿಳಿವುಗಳ ಹೋಲಿಕೆ  

ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.


ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,


ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.


ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು