Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:23
22 ತಿಳಿವುಗಳ ಹೋಲಿಕೆ  

ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.


ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.


ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.


ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”


ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.


ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.


ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.


ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.


ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.


ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.


ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು