Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:6
10 ತಿಳಿವುಗಳ ಹೋಲಿಕೆ  

ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.


ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು