Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:24
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.


‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು