Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:26
41 ತಿಳಿವುಗಳ ಹೋಲಿಕೆ  

“ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,


ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”


ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.


ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು