Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಘನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:8
17 ತಿಳಿವುಗಳ ಹೋಲಿಕೆ  

ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.


ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.


“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?”


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.


ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು