Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಸೆರೆವಾಸದಲ್ಲಿರುವ ನಿನ್ನ ಸ್ವಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:11
20 ತಿಳಿವುಗಳ ಹೋಲಿಕೆ  

ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”


ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.


ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.


“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


“ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.


ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.


ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು