Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:27
17 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.


ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.


ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.


ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.


ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು