Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:21
15 ತಿಳಿವುಗಳ ಹೋಲಿಕೆ  

ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.


ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”


ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.


ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು