Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವದನ್ನೂ, ಮುರಿದದನ್ನೂ ತೀರಾ ಮುರಿದುಬಿಟ್ಟು ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:22
8 ತಿಳಿವುಗಳ ಹೋಲಿಕೆ  

ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.


ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು