Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:10
16 ತಿಳಿವುಗಳ ಹೋಲಿಕೆ  

“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.


“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.


ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು