Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:12
14 ತಿಳಿವುಗಳ ಹೋಲಿಕೆ  

ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”


ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು