Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ತುತ್ತೂರಿಯ ಶಬ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದ್ದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಬ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬದುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:5
10 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು