Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:8
17 ತಿಳಿವುಗಳ ಹೋಲಿಕೆ  

ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.


ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು