Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:2
35 ತಿಳಿವುಗಳ ಹೋಲಿಕೆ  

“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.


ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು