Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕುರುಬರು ಇರಲಿಲ್ಲವಾದದರಿಂದ ಅವು ಚದರಿಹೋದವು; ದಿಕ್ಕಾಪಾಲಾಗಿ ಕಾಡಿನ ಸಕಲಮೃಗಗಳಿಗೆ ತುತ್ತಾದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಬರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದ್ದರಿಂದ ಅವು ಚದರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:5
20 ತಿಳಿವುಗಳ ಹೋಲಿಕೆ  

ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.


ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!


ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು