Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:1
13 ತಿಳಿವುಗಳ ಹೋಲಿಕೆ  

ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”


“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು