Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:4
15 ತಿಳಿವುಗಳ ಹೋಲಿಕೆ  

“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.


ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’


“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು