Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ಮಾತಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಬೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ನಿಂದನೆಯ ಮಾತುಗಳನ್ನು ಕೇಳಬೇಕಾಯಿತಲ್ಲಾ ಎಂದು ನನ್ನ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:6
11 ತಿಳಿವುಗಳ ಹೋಲಿಕೆ  

ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.


ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು