Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:25
33 ತಿಳಿವುಗಳ ಹೋಲಿಕೆ  

ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.


ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು