Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮಲ್ಲಿ ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:6
27 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.


ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”


ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು