Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:7
23 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”


“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು