Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:2
12 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.


ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು