Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ; ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯಜನರ ಪ್ರಾಕಾರಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:14
16 ತಿಳಿವುಗಳ ಹೋಲಿಕೆ  

ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.


ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.


ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.


ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು