Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:10
12 ತಿಳಿವುಗಳ ಹೋಲಿಕೆ  

ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”


“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.


ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು