Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ ಹದಿನಾಲ್ಕು ಮೊಳ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ; ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳ; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಲುಗಳು ಪೂರ್ವಭಾಗದಲ್ಲಿದ್ದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:17
11 ತಿಳಿವುಗಳ ಹೋಲಿಕೆ  

ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.


ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.


ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.


ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು