Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:3
13 ತಿಳಿವುಗಳ ಹೋಲಿಕೆ  

ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.


ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.


ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.


ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.


ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು