Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆದ್ದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅವಮಾನಿತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:13
8 ತಿಳಿವುಗಳ ಹೋಲಿಕೆ  

ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.


ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು