Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:17
8 ತಿಳಿವುಗಳ ಹೋಲಿಕೆ  

ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು