Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:19
13 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.


ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.


ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.


ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.


ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು