Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:29
14 ತಿಳಿವುಗಳ ಹೋಲಿಕೆ  

ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.


ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.


“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.


ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.


ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.


ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು