Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:17
34 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.


ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.


ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.


ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


“‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು