Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವನು ನನಗೆ ಹೀಗೆ ಹೇಳಿದನು - ಈ ಪ್ರವಾಹವು ಪೂರ್ವಪ್ರಾಂತ್ಯಕ್ಕೆ ಹೊರಟು ಅರಾಬಾ ಎಂಬ ತಗ್ಗಿಗೆ ಇಳಿದು ಲವಣಸಮುದ್ರದ ಕಡೆಗೆ ಹರಿಯುವದು; [ದೇವಸ್ಥಾನದಿಂದ] ಹೊರಟ ಪ್ರವಾಹವು ಲವಣ ಸಮುದ್ರಕ್ಕೆ [ಸೇರಲು] ಅದರ ನೀರು ಸಿಹಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:8
17 ತಿಳಿವುಗಳ ಹೋಲಿಕೆ  

ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.


ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,


ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.


ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು