Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:8
17 ತಿಳಿವುಗಳ ಹೋಲಿಕೆ  

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು