Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:9
37 ತಿಳಿವುಗಳ ಹೋಲಿಕೆ  

ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.


ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.


ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


“ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು