Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:10
19 ತಿಳಿವುಗಳ ಹೋಲಿಕೆ  

ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?


ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?


ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”


ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.


ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು