Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:17
25 ತಿಳಿವುಗಳ ಹೋಲಿಕೆ  

ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.


ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು