Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:3
39 ತಿಳಿವುಗಳ ಹೋಲಿಕೆ  

ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.


ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.


ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.


ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.


ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು